ಬೆಂಗಳೂರು: 2020 ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ (UAPA) ಕಾಯ್ದೆಯಡಿ ತಿಹಾರ್ ಜೈಲಿನಲ್ಲಿರುವ ಉಗ್ರ ಉಮರ್ ಖಾಲಿದ್ (Umar Khalid) ಕುರಿತ ಪುಸ್ತಕ ಬಿಡುಗಡೆಗೆ ರಾಜ್ಯ ಸರ್ಕಾರ ಅವಕಾಶ ನೀಡಬಾರದು ಎಂದು ಸಂಸದ ಪಿ.ಸಿ ಮೋಹನ್ (P.C. Mohan) ಅವರು ಹೇಳಿದ್ದಾರೆ.
ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ದೇಶದ್ರೋಹಿ ಉಮರ್ ಖಾಲಿದ್ 2020 ರ ದೆಹಲಿ ದಂಗೆಯ ಪ್ರಮುಖ ಆಪಾದಿತ. ಅಂದು ನಡೆದ ಸ್ಫೋಟದಲ್ಲಿ ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆಸ್ತಿ-ಪಾಸ್ತಿಗೆ ಹಾನಿಯಾಗಿದೆ. ಇಂದಿಗೂ ಜೈಲುಶಿಕ್ಷೆ ಅನುಭವಿಸುತ್ತಿರುವ ಆರೋಪಿಯನ್ನು ವೈಭವೀಕರಿಸುವ ಅಗತ್ಯವೇನು? ಎಂದು ಪ್ರಶ್ನಿಸಿದರು.
ದೊಮ್ಮಲೂರಿನ ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್ನಲ್ಲಿ ಹಮ್ಮಿಕೊಂಡಿರುವ ಪುಸ್ತಕ ಬಿಡುಗಡೆಗೆ ಅವಕಾಶ ಸಿಗಬಾರದು. ಕಾರ್ಯಕ್ರಮ ನಡೆಯಬಾರದು.ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.
ಇಂತಹ ಕಾರ್ಯಕ್ರಮ ಆಯೋಜಕರು ದೇಶದ್ರೋಹಿಗಳಾದ ಕಸಾಬ್, ಸಂಸತ್ತಿನ ದಾಳಿಕೋರರನ್ನು ವೈಭವೀಕರಿಸುವ ಕೆಲಸ ಮಾಡುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಇಂತಹ ಕಾರ್ಯಕ್ರಮಕ್ಕೆ ಅನುಮತಿ ಸಿಗುವುದಿಲ್ಲ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಇಂತಹ ಭಯೋತ್ಪಾದಕರ ಬಗ್ಗೆ ಸರ್ಕಾರ ಮೃದುಧೋರಣೆ ಹೊಂದಿದೆ. ಆದ್ದರಿಂದಲೇ ಇಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ ಎಂದರು.
ದೇಶದ್ರೋಹಿಗಳನ್ನು ವೈಭವೀಕರಿಸಲು ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತದೆ. ಗಾಂಧಿನಗರದ ಗೋಡೆಗಳ ಮೇಲೆ ಬರಹಗಳನ್ನು ಬರೆದಿದ್ದಾರೆ. ಈ ಸರ್ಕಾರ ಇಂತಹುದಕ್ಕೆಲ್ಲ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
Veekay News > Districts > Bengaluru Urban > ಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್
ಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್
ವೀ ಕೇ ನ್ಯೂಸ್28/04/2026
posted on





















