ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು ಕಾಯ್ದೆಗೆ (RTI) ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಬೆಲೆಯೇ ಇಲ್ಲದಂತಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದ ಸಾರ್ವಜನಿಕರು ಮಾಹಿತಿ ಪಡೆಯಲು ತಿಂಗಳುಗಟ್ಟಲೆ ಕಾಯುವಂತಾಗಿದ್ದು, ಅಧಿಕಾರಿಗಳ ಹಾರಿಕೆ ಉತ್ತರಕ್ಕೆ ಜನರು ಬೆಸತ್ತು ಹೋಗಿದ್ದಾರೆ.ವಜಾ ಮಾಡಲು ಆಗ್ರಹ:ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಖಿಲ ಭಾರತ ಅರ್ಚಕರ ಮತ್ತು ಪರೋಹಿತರ ಫೆಡ್ರೇಶನ್ನ ರಾಷ್ಟ್ರೀಯ ನಿರ್ದೇಶಕರಾದ ಬಿ. ಆರ್. ಗೋವರ್ಧನ್ ಪಾಣಿ ಅವರು, ಕರ್ತವ್ಯ ಲೋಪ ಎಸಗುತ್ತಿರುವ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.ವರದಿಯ ಮುಖ್ಯಾಂಶಗಳು:ತಿಂಗಳು ಕಳೆದರೂ ಸಿಗದ ಮಾಹಿತಿ: ಅರ್ಜಿ ಸಲ್ಲಿಸಿ 3-4 ತಿಂಗಳಾದರೂ ಯಾವುದೇ ಮಾಹಿತಿ ನೀಡದೆ ವಿಳಂಬ ಮಾಡಲಾಗುತ್ತಿದೆ.ಹಾರಿಕೆ ಉತ್ತರ: ಫೋನ್ ಮೂಲಕ ವಿಚಾರಿಸಿದರೆ “ಕಳಿಸುತ್ತೇವೆ” ಎಂಬ ಹಾರಿಕೆ ಉತ್ತರ ನೀಡಿ ಜಾರಿಕೊಳ್ಳುತ್ತಿದ್ದಾರೆ.ಹಳ್ಳಿಗಾಡಿನ ಜನರಿಗೆ ಸಂಕಷ್ಟ: ಪ್ರತಿಯೊಂದು ಸಣ್ಣ ವಿಚಾರಕ್ಕೂ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗದೆ ಗ್ರಾಮೀಣ ಭಾಗದ ಜನರು ಕಚೇರಿಗೆ ಅಲೆಯುವಂತಾಗಿದೆ.ನಿರ್ಲಕ್ಷ್ಯ: ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸಾರ್ವಜನಿಕರ ದೂರು.ಮಾಹಿತಿ ಹಕ್ಕು ಆಯೋಗ ಮತ್ತು ಸಂಬಂಧಪಟ್ಟ ಸಚಿವರು ಈ ಕೂಡಲೇ ಮಧ್ಯಪ್ರವೇಶಿಸಿ, ಕಾನೂನು ಉಲ್ಲಂಘಿಸುತ್ತಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಒತ್ತಾಯಿಸಲಾಗಿದೆ.ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಹಕ್ಕು ಕಾಯ್ದೆಗೆ (RTI) ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಬೆಲೆಯೇ ಇಲ್ಲದಂತಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದ ಸಾರ್ವಜನಿಕರು ಮಾಹಿತಿ ಪಡೆಯಲು ತಿಂಗಳುಗಟ್ಟಲೆ ಕಾಯುವಂತಾಗಿದ್ದು, ಅಧಿಕಾರಿಗಳ ಹಾರಿಕೆ ಉತ್ತರಕ್ಕೆ ಜನರು ಬೆಸತ್ತು ಹೋಗಿದ್ದಾರೆ.ವಜಾ ಮಾಡಲು ಆಗ್ರಹ:ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಖಿಲ ಭಾರತ ಅರ್ಚಕರ ಮತ್ತು ಪರೋಹಿತರ ಫೆಡ್ರೇಶನ್ನ ರಾಷ್ಟ್ರೀಯ ನಿರ್ದೇಶಕರಾದ ಬಿ. ಆರ್. ಗೋವರ್ಧನ್ ಪಾಣಿ ಅವರು, ಕರ್ತವ್ಯ ಲೋಪ ಎಸಗುತ್ತಿರುವ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.ವರದಿಯ ಮುಖ್ಯಾಂಶಗಳು:ತಿಂಗಳು ಕಳೆದರೂ ಸಿಗದ ಮಾಹಿತಿ: ಅರ್ಜಿ ಸಲ್ಲಿಸಿ 3-4 ತಿಂಗಳಾದರೂ ಯಾವುದೇ ಮಾಹಿತಿ ನೀಡದೆ ವಿಳಂಬ ಮಾಡಲಾಗುತ್ತಿದೆ.ಹಾರಿಕೆ ಉತ್ತರ: ಫೋನ್ ಮೂಲಕ ವಿಚಾರಿಸಿದರೆ “ಕಳಿಸುತ್ತೇವೆ” ಎಂಬ ಹಾರಿಕೆ ಉತ್ತರ ನೀಡಿ ಜಾರಿಕೊಳ್ಳುತ್ತಿದ್ದಾರೆ.ಹಳ್ಳಿಗಾಡಿನ ಜನರಿಗೆ ಸಂಕಷ್ಟ: ಪ್ರತಿಯೊಂದು ಸಣ್ಣ ವಿಚಾರಕ್ಕೂ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗದೆ ಗ್ರಾಮೀಣ ಭಾಗದ ಜನರು ಕಚೇರಿಗೆ ಅಲೆಯುವಂತಾಗಿದೆ.ನಿರ್ಲಕ್ಷ್ಯ: ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸಾರ್ವಜನಿಕರ ದೂರು.ಮಾಹಿತಿ ಹಕ್ಕು ಆಯೋಗ ಮತ್ತು ಸಂಬಂಧಪಟ್ಟ ಸಚಿವರು ಈ ಕೂಡಲೇ ಮಧ್ಯಪ್ರವೇಶಿಸಿ, ಕಾನೂನು ಉಲ್ಲಂಘಿಸುತ್ತಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಒತ್ತಾಯಿಸಲಾಗಿದೆ.
Veekay News > Local News > ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:
ವೀ ಕೇ ನ್ಯೂಸ್02/05/2026
posted on





















