ದಿನಾಂಕ:26/06/2025 ರಂದು ಬೆಳಿಗ್ಗೆ 11.30 ಗಂಟೆಗೆ ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬೆಂಗಳೂರು ನಗರ ಪೊಲೀಸ್ ವತಿಯಿಂದ “ಅಂತರರಾಷ್ಟಿçಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ” ಯನ್ನು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗೃಹ ಸಚಿವರಾದ ಡಾ:ಜಿ.ಪರಮೇಶ್ವರ ರವರು ಉದ್ಘಾಟಿಸಲಿದ್ದಾರೆ. ರಿಜ್ವಾನ್ ಅರ್ಷದ್, ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ ರವರು ಅಧ್ಯಕ್ಷತೆಯನ್ನು ವಹಿಸುತ್ತಾರೆ. ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕ ಎಂ.ಎ.ಸಲೀ0, ಐ.ಪಿ.ಎಸ್ ರವರು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು, ಗಣ್ಯರು, ತಜ್ಞರು ಮತ್ತು ಹಲವಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುತ್ತಾರೆ.
ಅದೇ ದಿನ ಮಾನ್ಯ ಗೃಹ ಮಂತ್ರಿಗಳಿAದ ಪೊಲೀಸರು ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ನಾಶಗೊಳಿಸುವ ಬಗ್ಗೆ ಪ್ರಾತ್ಯಕ್ಷಿಕ ಹಾಗೂ ಕ್ಯೂಆರ್ ಕೋಡ್ ಬಿಡುಗಡೆ ಮತ್ತು ಪ್ರತಿಜ್ಞೆ ವಿಧಿಯನ್ನು ಬೋಧಿಸಲಿದ್ದಾರೆ.