Live Stream

[ytplayer id=’22727′]

| Latest Version 8.0.1 |

State News

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ: ಮಾಡದಿದ್ದರೆ ಕಾರ್ಡ್ ರದ್ದು — ಸಚಿವ ಕೆ.ಹೆಚ್. ಮುನಿಯಪ್ಪ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ: ಮಾಡದಿದ್ದರೆ ಕಾರ್ಡ್ ರದ್ದು — ಸಚಿವ ಕೆ.ಹೆಚ್. ಮುನಿಯಪ್ಪ

ಮೈಸೂರು: ರಾಜ್ಯದ ಪಡಿತರ ಚೀಟಿದಾರರು ತಾವು ಫಲಾನುಭವಿಗಳಾಗಿರುವುದನ್ನು ದೃಢೀಕರಿಸಲು ಇ-ಕೆವೈಸಿ (e-KYC) ಪ್ರಕ್ರಿಯೆಗೂಡಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಆದೇಶ ನೀಡಿದ್ದಾರೆ. ಮಾಡದೆ ಇದ್ದಲ್ಲಿ ಅಂತಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಸರ್ಕಾರ ಸಜ್ಜು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳ ಅವಧಿ ನೀಡಬೇಕು ಎಂದು ಸೂಚಿಸಿದರು. ಈ ಅವಧಿಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಪಡಿತರ ಸೇವೆಯಿಂದ ವಂಚನೆ ಸಂಭವಿಸಲಿದೆ.

ಸಚಿವರು ಅಧಿಕಾರಿಗಳಿಗೆ ಮಾತನಾಡುವ ವೇಳೆ, ಇ-ಕೆವೈಸಿ ಕಾರ್ಯದಲ್ಲಿ ವಿಳಂಬವಾಗಬಾರದು, ತ್ವರಿತಗತಿಯ ಕಾರ್ಯವೈಖರಿಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಅನಗತ್ಯವಾಗಿ ಹೊಸ ಪಡಿತರ ಕಾರ್ಡುಗಳನ್ನು ವಿತರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸೂಚನೆ ಕೂಡ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚನೆ ಮಾಡುವಂತೆ ತಿಳಿಸಿದ ಅವರು, ಸಾರ್ವಜನಿಕರಲ್ಲಿ ಮಾಹಿತಿ ಅರಿವು ಹೆಚ್ಚಿಸಲು ಕ್ರಮ ಜರುಗಿಸಬೇಕೆಂದು ಹೇಳಿದರು.

ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ಸುರಕ್ಷತೆ ಕುರಿತಂತೆ ಮಾತನಾಡಿದ ಸಚಿವರು, ಗೋದಾಮುಗಳಲ್ಲಿ ಭದ್ರತೆಯೊಂದಿಗೆ ಸಂಗ್ರಹಿಸಬೇಕು ಮತ್ತು ಖರೀದಿ ಮಾಡಲಾದ ಧಾನ್ಯಗಳು ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಕಾನೂನು ಮಾಪನ ಶಾಸ್ತ್ರ ಇಲಾಖೆಯ ವಾಹನ ಸೌಲಭ್ಯ ಹಾಗೂ ಖಾಲಿ ಹುದ್ದೆಗಳ ಭರ್ತಿ ವಿಷಯದಲ್ಲಿಯೂ ಚರ್ಚೆ ನಡೆಯಿತು. ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ಖಾಲಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ನೀಡುವುದು ಹಾಗೂ ಕಂದಾಯ ಇಲಾಖೆಯಿಂದ ತಾತ್ಕಾಲಿಕ ಪ್ರಭಾರ ನೀಡುವುದು ಎಂದೂ ಹೇಳಿದ್ದಾರೆ.

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";