ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 21, ಗುರುವಾರ ಸಂಜೆ 5-15ಕ್ಕೆ ಶ್ರೀ ಶಿಶಿರ್ ಕೆ.ಪಿ. ಅವರಿಂದ “ದಾಸವಾಣಿ” ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಕು|| ಸಂಸ್ಕೃತಿ ಕೆ. ಬಾಣಾವರ್ (ಹಾರ್ಮೋನಿಯಂ), ಶ್ರೀ ಧ್ರುವ ಆಚಾರ್ಯ (ತಬಲಾ), ಕು|| ಇಂಚರ ಎಸ್. ಆರ್. (ತಾಳ) ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು41
Veekay News > Feature Article > Cultural > ದಾಸವಾಣಿ ಕಾರ್ಯಕ್ರಮ
ದಾಸವಾಣಿ ಕಾರ್ಯಕ್ರಮ
ವೀ ಕೇ ನ್ಯೂಸ್19/08/2025
posted on

the authorವೀ ಕೇ ನ್ಯೂಸ್
All posts byವೀ ಕೇ ನ್ಯೂಸ್
Leave a reply