Live Stream

[ytplayer id=’22727′]

| Latest Version 8.0.1 |

Davanagere

BREAKING NEWS : ದಾವಣಗೆರೆ: ವಂದೇ ಭಾರತ್ ರೈಲಲ್ಲಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ

BREAKING NEWS : ದಾವಣಗೆರೆ: ವಂದೇ ಭಾರತ್ ರೈಲಲ್ಲಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ

ಸಾಂದರ್ಭಿಕ ಚಿತ್ರ

ದಾವಣಗೆರೆ: ವಂದೇ ಭಾರತ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.
ಧಾರವಾಡದಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ತೆರಳುತ್ತಿತ್ತು ಎನ್ನಲಾಗಿದ್ದು, ದಾವಣಗೆರೆ ಬಳಿ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತ ಗಮನಿಸಿದ ಗೇಟ್ ಮ್ಯಾನ್ ರೈಲ್ವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಗಳು ಲಭ್ಯವಾದ ಕೂಡಲೇ, ಎಚ್ಚೆತ್ತ ಸಿಬ್ಬಂದಿ ದಾವಣಗೆರೆಯಲ್ಲಿ ರೈಲನ್ನು ನಿಲ್ಲಿಸಿದ್ದಾರೆ. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ .
ದುರದೃಷ್ಟವಶಾತ್ ರೈಲ್ವೇ ಪೊಲೀಸರು ಹಾಗೂ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದೇ ಹೇಳಬಹುದು. ವಂದೇ ಭಾರತ್ ರೈಲಿನಲ್ಲಿದ್ದ ಪ್ರಯಾಣಿಕರು, ಶತಾಬ್ದಿ ಎಕ್ಸ್ಪ್ರೆಸ್‌ನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.

ವೀ ಕೇ ನ್ಯೂಸ್
";