ಬೆಂಗಳೂರು: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಕಾರಣ ನೀಡಿ ಅಮಾನತು ಮಾಡಿದ್ದ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯಿಂದ ರದ್ದು ಮಾಡಿದೆ,
ಆರ್ ಸಿಬಿ ಕಾಲ್ತುಳಿತ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು, ಇದು ಕರ್ತವ್ಯ ಲೋಪದಿಂದಲೇ ಆಗಿರೋದು ಎಂದು ರಾಜ್ಯ ಸರ್ಕಾರವು ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತು,
ಇದಾಗಿ ಕೆಲ ದಿನಗಳ ಬಳಿಕ ರಾಜ್ಯ ಸರ್ಕಾರಕ್ಕೆ ಕೇಂದ್ರವು ಘಟನೆಯ ಸಮಗ್ರ ರಿಪೋರ್ಟ್ ನೀಡುವಂತೆ ಕೇಳಿತ್ತು,
ಅದರಂತೆ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಭದ್ರತಾ ವೈಫಲ್ಯ ಹಾಗೂ ಸಂವಹನ ಕೊರತೆ ಪ್ರಮುಖ ಕಾರಣಗಳು, ಈ ಅಂಶಗಳನ್ನಾಧರಿಸಿಯೇ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ರಿಪೋರ್ಟ್ ಸಲ್ಲಿಸಲಾಗಿತ್ತು,
ಇದೀಗ ಈ ಬಗ್ಗೆ ಪರಿಶೀಲನೆ ನಡೆಸಿದ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿಯು ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ,
Veekay News > State News > ಕಾಲ್ತುಳಿತ ಪ್ರಕರಣ-ಐಪಿಎಸ್ ಅಧಿಕಾರಿಗಳ ಅಮಾನತು ರದ್ದು
ಕಾಲ್ತುಳಿತ ಪ್ರಕರಣ-ಐಪಿಎಸ್ ಅಧಿಕಾರಿಗಳ ಅಮಾನತು ರದ್ದು
ವೀ ಕೇ ನ್ಯೂಸ್01/07/2025
posted on

the authorವೀ ಕೇ ನ್ಯೂಸ್
All posts byವೀ ಕೇ ನ್ಯೂಸ್
Leave a reply