Live Stream

[ytplayer id=’22727′]

| Latest Version 8.0.1 |

State News

ರೆಬೆಲ್ ಶಾಸಕರ ಅಬ್ಬರ: ಸಿಎಂ ಮೇಲೆ ಹೈಕಮಾಂಡ್ ಪ್ರಹಾರ

ರೆಬೆಲ್ ಶಾಸಕರ ಅಬ್ಬರ: ಸಿಎಂ ಮೇಲೆ ಹೈಕಮಾಂಡ್ ಪ್ರಹಾರ

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಮೊದಲ ದಿನ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರಪತಿ ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ, ಸಿಎಂ ಗೆ ಹೈಕಮಾಂಡ್ ಖಡಕ್ ಸೂಚನೆಗಳನ್ನು ನೀಡಿದ್ದಾರೆ,
ಗ್ಯಾರಂಟಿ ಗ್ಯಾರಂಟಿ ಎನ್ನುತ್ತಾ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೀತಾ ಬಂತು, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಎಂಬ ಮಾತು ವಿಪಕ್ಷಗಳಿಂದ ಕೇಳಿಬರ್ತಿರುವ ಆರೋಪ, ಅದಕ್ಕೆ ಪುಷ್ಟಿ ನೀಡುವಂತೆ ಸ್ವಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕ್ತಿದ್ದಾರೆ, ಇದರ ಬೆನ್ನಲ್ಲೇ ದೆಹಲಿ ತಲುಪಿರೋ ಸಿಎಂ ಸಿದ್ದರಾಮಯ್ಯ, ಅತೃಪ್ತ ಶಾಸಕರನ್ನು ಮನವೊಲಿಸುವ ಜೊತೆಗೆ ವಿಶೇಷ ಅನುದಾನ ತರುವ ಹೆಜ್ಜೆ ಇರಿಸಿದ್ದಾರೆ,
ಸರ್ಕಾರ ರಚನೆಯಾಗಿ ಎರಡೂವರೆ ವರ್ಷ ಕಳೀತಾ ಬಂದ್ರೂ ಇನ್ನು ಟೇಕಾಫ್ ಆಗ್ತಾನೇ ಇದೆ, ಸರ್ಕಾರದ ವಿರುದ್ಧ ಸ್ಪಪಕ್ಷೀಯ ಶಾಸಕರೇ ಸಿಡಿದೆದ್ದಿದ್ದಾರೆ, ಒಬ್ಬರಾದ ಮೇಲೆ ಒಬ್ಬರಂತೆ ಕ್ಷೇತ್ರಗಳಿಗೆ ಅನುದಾನಕ್ಕಾಗಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕ್ತಿದ್ದಾರೆ, ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಭೇಟಿ ಮಾಡಿ ಚರ್ಚಿಸಿದ್ದಾರೆ, ಸರ್ಕಾರದ ಅಸಮಧಾನಿತರನ್ನು ಕರೆದು ಮಾತನಾಡುವಂತೆ ಸಿಎಂ ಗೆ ಖರ್ಗೆ ಖಡಕ್ ಸೂಚನೆ ನೀಡಿದ್ದಾರೆ,
ಪ್ಲಾನ್ ಬಿ ಸಿದ್ಧಪಡಿಸಿದ್ದಾರೆ ಸಿದ್ದರಾಮಯ್ಯ
ಮೂರ್ನಾಲ್ಕು ದಿನದಿಂದ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಿಸುತ್ತಿದೆ, ಒಂದು ಕಡೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕರು ಬಂಡೆದ್ದಿದ್ದರೆ, ಇನ್ನೊಂದು ಕಡೆ ಸರ್ಕಾರದ ಹಗರಣಗಳನ್ನು ಸ್ವತಃ ಕೈ ಶಾಸಕರೇ ಬಯಲಿಗೆಳೆದು ಸಿದ್ದು ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ, ಸಿದ್ದರಾಮಯ್ಯ ಕರೆದು ಮಾತಾಡುತ್ತೇನೆ ಎಂದು ಹೇಳಿದ್ರೂ ಕೂಡ ಶಾಸಕರು ಬಾಯಿ ಮುಚ್ಚಿಲ್ಲ, ಎಲ್ಲ ಶಾಸಕರು ಒಮ್ಮಲೇ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ,
ಪರಿಸ್ಧಿತಿ ಹತೋಟಿಗೆ ಸಿಗದೇ ಮುನ್ನುಗ್ಗುತ್ತಿರುವಾಗ ಸಿಎಂ ಸಿದ್ದರಾಮಯ್ಯ ದಿಢೀರ್ ದಿಲ್ಲಿ ಫ್ಲೈಟ್ ಹತ್ತಿದ್ದಾರೆ, ಹೈಕಮಾಂಡ್ ಚಾಟಿ ಬೀಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅತೃಪ್ತ ಶಾಸಕರ ಮನವೊಲಿಕೆ ಗೆ ಮಾಸ್ಟರ್ ಪ್ಲಾನ್ ಹೆಣೆದಿದ್ದಾರೆ
ಜುಲೈ ತಿಂಗಳಲ್ಲಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಸಿಎಂ ನಿರ್ಧರಿಸಿದ್ದಾರಂತೆ

- Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";