Live Stream

[ytplayer id=’22727′]

| Latest Version 8.0.1 |

Art & Literature

ಜೂ25ರದು ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನ

ಜೂ25ರದು ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನ

ಜಾನಪದ ಕಲಾವಿದರಿಗೆ ಪ್ರೋತ್ಸಾಹ, ಸಹಕಾರ ಮತ್ತು ನಗರದ ಜನತೆಗೆ ಜಾನಪದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ.

ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಜೂನ್ 25ನೇ ತಾರೀಖು ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಆಯೋಜಿಸಿದ್ದಾರೆ ಇದರ ಕುರಿತು ಮಾಧ್ಯಮಗೋಷ್ಟಿ.

ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ.ಜಾನಪದ ಎಸ್.ಬಾಲಾಜಿ, ಜಿಲ್ಲಾಧ್ಯಕ್ಷ ಡಾ. ರಿಯಾಜ್ ಪಾಷ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ರ.ನರಸಿಂಹಮೂರ್ತಿರವರು, ಪದಾಧಿಕಾರಿಗಳಾದ ಅಶ್ವಥ್ ನಾರಾಯಣ, ಕೇಶವರಾಜ್, ಆನಿತಾ, ವಾಣಿ, ಮುರಳೀಧರ, ರಾಮಾಂಜನೇಯ, ಕಣ್ಣಯ್ಯ ಭಾಗವಹಿಸಿದ್ದರು.

ಜಾನಪದ ಎಸ್.ಬಾಲಾಜಿರವರು ಮಾತನಾಡಿ ಜಾನಪದ ಕಲೆ. ಪರಂಪರೆ ನಗರದ ಪ್ರದೇಶದ ಜನರಿಗೆ ತಿಳಿಸಲು 25ನೇ ತಾರೀಖು ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ರಾಷ್ಟ್ರ ಧ್ವಜ, ರಾಜ್ಯ ಧ್ವಜ ಮತ್ತು ಪರಿಷತ್ತಿನ ಧ್ವಜರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ವಿವಿಧ ಕಲಾ ತಂಡಗಳ ಪ್ರದರ್ಶನ, ನಂತರ ಉದ್ಘಾಟನೆ, ‘ಸೋಬಾನ” ಸ್ಮರಣ ಸಂಚಿಕೆ ಬಿಡುಗಡೆ, ಪ್ರಶಸ್ತಿ ಪ್ರಧಾನ ಹಾಗೂ ಜಾನಪದ ಗೋಷ್ಟಿ, ಮಹಿಳಾ ಜಾನಪದ ಗೋಷ್ಟಿ, ಬಹಿರಂಗ ಅಧಿವೇಶನ, ಕೃತಿ ಬಿಡುಗಡೆ ಸಮಾರೋಪ ಸಮಾರಂಭ ಬೆಳಗ್ಗೆಯಿಂದ ಸಂಜೆಯವರಗೆ ನಡೆಯಲಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 100 ಯುವಕ ಯುವತಿಯರಿಗೆ ರಾಜ್ಯ ಯುವ ಸಿರಿ ಪ್ರಶಸ್ತಿ, 60ವಿದ್ವಾಂಸರಿಗೆ,
ಜೀ.ಶಂ.ಪ, ನಾಡೋಜ ಎಸ್ ಕೆ ಕರೀಂಖಾನ್, ಮಧುರಚೆನ್ನ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ಜಾನಪದ ಸಮ್ಮೇಳನ ನಾಡಿನ ಹೆಸರಾಂತ ಮಠದ ಪೀಠಾಧಿಪತಿಗಳು, ಸಚಿವರು, ಶಾಸಕರು, ಸಾಹಿತಿಗಳು ಗಣ್ಯ ಮಹನೀಯರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ರಿಯಾಜ್ ಪಾಷರವರು ಮಾತನಾಡಿ ಬೆಂಗಳೂರು ನಗರ ಪ್ರದೇಶದಲ್ಲಿ ಪ್ರಥಮ ಬಾರಿಗೆ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ.
ಮೊಬೈಲ್ ಸಂಸ್ಕೃತಿಯಿಂದ ಹೊರ ಬರಬೇಕು, ಜಾನಪದ ಕಲೆಯ ಕುರಿತು ಅರಿವು ಮೂಡಿಸಬೇಕು. ನಗರ ಪ್ರದೇಶದಲ್ಲಿಯೂ ಸಹ ಜಾನಪದ ಕುರಿತು ತಿಳಿಯಬೇಕು ಮತ್ತು ಜಾನಪದ ಕಲಾವಿದರಿಗೆ ಅವಕಾಶ ಸಿಗಬೇಕು ಎಂದು ಜಾನಪದ ಸಮ್ಮೇಳನ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.

ರ.ನರಸಿಂಹಮೂರ್ತಿರವರು ಮಾತನಾಡಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವತಿಯಿಂದ ಪರಿಷತ್ ಘಟಕದ ವತಿಯಿಂದ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ, ಸಮ್ಮೇಳನಾಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ರವರು ಭಾಗವಹಿಸಲಿದ್ದಾರೆ.

ನಾಡಿನ ಇತಿಹಾಸ ಮತ್ತು ಸಂಸ್ಕೃತಿ ಕುರಿತು ಅರಿಯಬೇಕಾದರೆ ಜಾನಪದ ಕಲೆಯ ಬಗ್ಗೆ ತಿಳಿಯಬೇಕು ಮತ್ತು ಜಾನಪದ ಕಲೆ ಉಳಿದರೆ ನಾಡಿನ ಇತಿಹಾಸ ಉಳಿಯುತ್ತದೆ ಅದ್ದರಿಂದ ಜಾನಪದ ಸಮ್ಮೇಳನ ಮತ್ತು ಜಾನಪದ ಕುರಿತು ಕೃತಿ ಬಿಡುಗಡೆ ಕಾರ್ಯಕ್ರಮವಿದೆ. ಸಚಿವರು, ಶಾಸಕರು, ಗಣ್ಯ ಮಹನೀಯರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

- Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";