ಕೆಜಿಎಫ್.: ಕಾಮಸಮುದ್ರಂ ಪೊಲೀಸರು ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಕಳವು ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ರೂ.6,70,000/-(ರೂಪಾಯಿ ಆರು ಲಕ್ಷದ ಎಪ್ಪತ್ತು ಸಾವಿರ ಮಾತ್ರ) ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಏ. 04 ರಂದು ದೂರುದಾರರಾದ ಪೊಲೇನಹಳ್ಳಿ ಗ್ರಾಮದ ಮುನಿವೆಂಕಟಪ್ಪ ಎಂಬುವರು ತನ್ನ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಕಾಮಮುದ್ರಂ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿ, ತನಿಖೆ ನಡೆಸಲಾಗುತ್ತಿತ್ತು. ಪ್ರಕರಣದಲ್ಲಿ ಆರೋಪಿ ಮತ್ತು ಮಾಲನ್ನು ಪತ್ತೆ ಮಾಡಲು ಡಿವೈಎಸ್ಪಿ ಎಸ್.ಪಾಂಡುರAಗ ಅವರ ಮಾರ್ಗದರ್ಶನದಲ್ಲಿ ಕಾಮಸಮುದ್ರಂ ಸಿಪಿಐ ಜಿ.ಸಿ.ನಾರಾಯಣಸ್ವಾಮಿ ಮತ್ತು ಪಿಎಸ್ಐ ಕಿರಣ್ಕುಮಾರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.
ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಗಾರಪೇಟೆ ತಾಲ್ಲೂಕು ಶಿವಲಿಂಗ ಗ್ರಾಮದ ವಾಸಿ ಚಂದ್ರಪ್ಪ (48 ವರ್ಷ) ಎಂಬುವರನ್ನು ಬಂಧಿಸಿ, ಆತನಿಂದ ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಯ ಒಟ್ಟು ಎರಡು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.6,70,000/- ಮೌಲ್ಯದ 69 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಕಾಮಸಮುದ್ರಂ ಪಿ.ಎಸ್.ಐ ಬಿ.ವಿ.ಕಿರಣ್ಕುಮಾರ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿಗಳಾದ ಮಂಜುನಾಥರೆಡ್ಡಿ, ಮುನಾವರ್ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷö್ಮಣತೇಲಿ ಹಾಗೂ ಜೀಪ್ ಚಾಲಕ ಗುರುಮೂರ್ತಿ ರವರ ಉತ್ತಮ ಕೆಲಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾAತರಾಜು ಅವರು ಪ್ರಶಂಶಿಸಿದ್ದಾರೆ.