ಕೋರಮಂಗಲದ ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾಂಗಣದಲ್ಲಿ ನಡೆದ, ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದ ಉದ್ಘಾಟನಾ ಸಮಾರಂಭವನ್ನು Dr. ಜಿ ಪರಮೇಶ್ವರ, ಸನ್ಮಾನ್ಯ ಗೃಹ ಸಚಿವರು ಕರ್ನಾಟಕ ಸರ್ಕಾರ ರವರು ನೆರವೇರಿಸಿದರು. ವಿಶೇಷ ಆಹ್ವಾನಿತರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ರವರು ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ತಂಡಗಳಿಗೆ ಬಹುಮಾನವನ್ನು ವಿತರಿಸಿದರು. ಈ ಸಮಾರೋಪ ಸಮಾರಂಭದಲ್ಲಿ Dr. ಎಂ ಎ ಸಲೀಂ, ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಪೊಲೀಸ್ ಪಡೆಯ ಮುಖ್ಯಸ್ಥರು ಹಾಗೂ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.