Live Stream

[ytplayer id=’22727′]

| Latest Version 8.0.1 |

Bengaluru Urban

*ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ ಅಂತರಾಷ್ಟ್ರೀಯ ಕ್ರೀಡಾಂಗಣವಾಗಿ ರೂಪಿಸಲು ಹೆಚ್ಚಿನ ಅನುದಾನ ನೀಡಿಕೆ*

*ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ ಅಂತರಾಷ್ಟ್ರೀಯ ಕ್ರೀಡಾಂಗಣವಾಗಿ ರೂಪಿಸಲು ಹೆಚ್ಚಿನ ಅನುದಾನ ನೀಡಿಕೆ*

*28ನೇ ರಾಜ್ಯಮಟ್ಟದ ಅಂತರ ಶಾಲಾ ಬಾಲಕ, ಬಾಲಕಿಯರ ವಾಲಿಬಾಲ್ ಚಾಂಪಿಯನ್ ಶಿಪ್ ಬಾಂಧವ ಕೌನ್ಸಿಲರ್ ಕಪ್-2025*

*ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ ಅಂತರಾಷ್ಟ್ರೀಯ ಕ್ರೀಡಾಂಗಣವಾಗಿ ರೂಪಿಸಲು ಹೆಚ್ಚಿನ ಅನುದಾನ ನೀಡಿಕೆ*

*ಸರ್ಕಾರಿ ಶಾಲೆಯ ಮಕ್ಕಳಿಗೆ ಹೈಟೆಕ್ ಶಿಕ್ಷಣ, ಕ್ರೀಡೆಯಲ್ಲಿ ಪ್ರೋತ್ಸಹ, ನಮ್ಮ ಶಾಲೆಯ ಮಕ್ಕಳು ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬೇಕು-ಸಚಿವ ರಾಮಲಿಂಗಾರೆಡ್ಡಿ*

ಜಯನಗರ: ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ 28ನೇ ರಾಜ್ಯಮಟ್ಟದ ಅಂತರಶಾಲಾ ವಾಲಿಬಾಲ್ ಚಾಂಪಿಯನ್ ಶಿಪ್ ಬಾಲಕ, ಬಾಲಕಿಯರ ಬಾಂದವ ಕೌನ್ಸಲಿರ್ ಕಪ್-2025ಮೂರು ದಿನಗಳ ಕಾಲ ಜರುಗಲಿದೆ.

ಉದ್ಘಾಟನೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು, ಅವಧೂತ ವಿನಯ್ ಗುರೂಜಿರವರು, ಶಾಸಕಿ,ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಸೌಮ್ಯರೆಡ್ಡಿ, ಆಡಳಿತ ಪಕ್ಷದ ಮಾಜಿ ನಾಯಕ, ಬಾಂಧವ ಸಂಸ್ಥೆ ಸಂಸ್ಥಾಪಕ ಎನ್.ನಾಗರಾಜುರವರು, ಪದ್ಮನಾಭನಗರ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪ್ರಮೋದ್ ಶ್ರೀನಿವಾಸ್ ರವರು ವಾಲಿಬಾಲ್ ಚೆಂಡು ಹೊಡೆಯವ ಮೂಲಕ ನಂತರ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು.

*ಸಚಿವ ರಾಮಲಿಂಗಾರೆಡ್ಡಿ* ರವರು ಮಾತನಾಡಿ ನಾವು ಸಸಿ ನೆಟ್ಟ ಮೇಲೆ ಗಿಡವಾಗಬೇಕಾದರೆ ನೀರು, ಬಿಸಿಲು, ನೆರಳು ಎಲ್ಲವು ಸರಿಯಾಗಿ ಇದ್ದಾಗ ಡೊಡ್ಡ ಮರವಾಗಿ ಬೆಳಯುತ್ತದೆ ಅದೇ ರೀತಿ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಉತ್ತಮ ಶಾಲೆ, ಗುರುಗಳ ಮಾರ್ಗದರ್ಶನದಿಂದ ಒಳ್ಳೆಯ ವಿದ್ಯಾರ್ಥಿಯಾಗಿ ರೂಪಗೊಳ್ಳಬಹುದು, ಮಾನಸಿಕ, ದೃಹಿಕವಾಗಿ ಆರೋಗ್ಯವಂತರಾಗಿ ಇರಬೇಕು ಎಂದರೆ ಕ್ರೀಡಾ ಚಟುವಟೆಕೆ ಮುಖ್ಯ.

ನಮ್ಮ ಬಿಟಿಎಂ ಮತ್ತು ಜಯನಗರ ಸರ್ಕಾರಿ ಶಾಲೆಯ ಮಕ್ಕಳಿಗೆ ಹೈಟೆಕ್ ಶಾಲೆ ನಿರ್ಮಿಸಿ, ಶ್ರೀಮಂತರ ಮಕ್ಕಳಿಗೆ ಸಿಗುವ ಶಿಕ್ಷಣದಲ್ಲಿನ ಸೌವಲತ್ತು, ಸೌಲಭ್ಯಗಳು ಸರ್ಕಾರಿ ಶಾಲೆಯ ಮಕ್ಕಳಿಗೆ ಸಿಗುವಂತೆ ಮಾಡಲಾಗಿದೆ.

ಮಕ್ಕಳಿಗೆ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣದಲ್ಲಿ ತರಭೇತಿ ಪಡೆಯಲು ಅನುಕೂಲವಾಗಲಿ ಎಂದು ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಹೆಚ್ಚಿನ ಅನುದಾನ ನೀಡಲಾಗುವುದು.

ನಲಿ-ಕಲಿ ಮಕ್ಕಳು ನಲಿಯುತ್ತ ಕಲಿಯಬೇಕು, ಎಲ್ಲ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿಬೇಕು, ರಾಷ್ಟ್ರ, ಅಂತರರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಮಕ್ಕಳು ಪದಕ ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಎನ್.ನಾಗರಾಜುರವರ ಬಾಂಧವ ಸಂಸ್ಥೆ ಶ್ರಮಿಸುತ್ತಿದೆ ಎಂದು ಹೇಳಿದರು.

*ಅವಧೂತ ವಿನಯಗುರೂಜಿ* ರವರು ಮಾತನಾಡಿ ಮಕ್ಕಳು ದೇವರ ಸಮಾನ ಅವರನ್ನ ಪ್ರೀತಿ, ವಿಶ್ವಾಸದಿಂದ ಬೆಳಸಬೇಕು, ತಂದೆ, ತಾಯಿ ಮತ್ತು ಸಮಾಜದಿಂದ ಮಕ್ಕಳಿಗೆ ಪ್ರೀತಿ, ವಿಶ್ವಾಸ ಸಿಕ್ಕಾಗ ಮಕ್ಕಳು ಕೆಟ್ಟದಾರಿಗೆ ಹೋಗುವುದಿಲ್ಲ.

ಮಕ್ಕಳಿಗೆ ಕ್ರೀಡಾಸಕ್ತಿ ಬೆಳಸಬೇಕು, ತಂದೆ, ತಾಯಿ ಮತ್ತು ಶಿಕ್ಷಕರು ಮಕ್ಕಳಿಗೆ ಯಾರ ಕ್ರೀಡೆಯಲ್ಲಿ ಆಸಕ್ತಿ ಇದೆ ಎಂಬುದು ತಿಳಿದುಕೊಂಡು ಅದರಲ್ಲಿ ಅವರಿಗೆ ತೊಡಗಿಸಿಕೊಳ್ಳಲು ಪೇರಣೆ ನೀಡಬೇಕು.

ಕ್ರೀಡೆಗೆ ಪ್ರೋತ್ಸಹ, ಸಹಕಾರ ಸಿಕ್ಕಾಗ ನಮ್ಮ ಮಕ್ಕಳು ಸಹ ಓಲಿಂಪಿಕ್ , ಏಷಿಯಡ್ ಗೇಮ್ಸ್ ನಲ್ಲಿ ಪದಕಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

*ಬಾಂಧವ ಅಧ್ಯಕ್ಷರಾದ ಎನ್.ನಾಗರಾಜುರವರು* ಮಾತನಾಡಿ ಬಾಂಧವ ಸಾಮಾಜಿಕ ಸೇವಾ ಸಂಘಟನೆಯು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಪರಿಸರ ಜಾಗೃತಿ ಕುರಿತು ನಿರಂತರ ಕಾಳಜಿವಹಿಸಿ ಶ್ರಮಿಸುತ್ತಿದೆ.

ನಮ್ಮ ಸಂಸ್ಥೆಯ ವತಿಯಿಂದ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಹ ಜೊತೆಯಲ್ಲಿ ಕ್ರೀಡಾಸಕ್ತಿ ಬೆಳಸುತ್ತಿದೆ. ಚಿಕ್ಕ ಮಕ್ಕಳು ದೃಹಿಕವಾಗಿ ಶಕ್ತಿವಂತರಾಗಬೇಕು, ಸಶಕ್ತ, ಸದೃಢ ಮಕ್ಕಳು ಇದ್ದಾಗ ದೇಶ ಕಟ್ಟುವಲ್ಲಿ ಸಹಕಾರಿಯಾಗುತ್ತದೆ.

ರಾಜ್ಯಾದ್ಯಂತ 200ಕ್ಕೂ ಹೆಚ್ಚು ಶಾಲೆಯ ತಂಡಗಳು 3500ಮಕ್ಕಳು ಮೂರು ದಿನಗಳ ಕಾಲ ಬಾಲಕ-ಬಾಲಕಿಯರು ಈ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

ಗೆದ್ದ ತಂಡಗಳಿಗೆ ಪಾರಿತೋಷಕ ಮತ್ತು ಪ್ರಮಾಣಪತ್ರ ನೀಡಲಾಗುತ್ತದೆ ಮತ್ತು ಹಿರಿಯ ವಾಲಿಬಾಲ್ ಕ್ರೀಡಾಪಟುಗಳಿಗೆ ಗೌರವಿಸಿ ಸನ್ಮಾನಿಸಲಾಗುತ್ತಿದೆ ಎಂದು

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";