ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್(Sri Girijaa char) ಮತ್ತು ನೂತನ ವ್ಯವಸ್ಥಾಪಕರಾದ ಶ್ರೀ ನಂದಕಿಶೋರಾಚಾರ್ಯರ(Sri Nandakishora charya) ನೇತೃತ್ವದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವದ ಅಂಗವಾಗಿ ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಮತ್ತು ಉತ್ಸವ ಮೂರ್ತಿಗಳಿಗೆ ಮಹಾಮಂಗಳಾರತಿಯು ನೆರವೇರಿಸಲಾಯಿತು. ಬೆಳಗ್ಗೆ 7:30ಕ್ಕೆ ಶ್ರೀನಿವಾಸ ದೇವರಿಗೆ ಮಹಾ ಅಭಿಷೇಕ ಪಂಚಾಮೃತದೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಫಲ ಪಂಚಾಮೃತ ಅಭಿಷೇಕವು ಅರ್ಚಕರಾದ ಇಂದಿರೇಶ ಆಚಾರ್ ಮತ್ತು ಶ್ರೀಪಾದ ಆಚಾರ್ಯರಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ನೆರವೇರಿಸಿ ವಿಶೇಷ ಅಲಂಕಾರದೊಂದಿಗೆ ಮಹಾಮಂಗಳಾರತಿಯು ನೆರವೇರಿತು. ಈ ಸಂದರ್ಭದಲ್ಲಿ ಸೇವಾಕರ್ತೃಗಳು, ಶ್ರೀಮಠದ ಶಿಷ್ಯರು, ಭಕ್ತರು, ಶ್ರೀಮಠದ ಸಿಬ್ಬಂದಿಗಳು ಸ್ವಯಂ ಸೇವಕರು ಭಾಗವಹಿಸಿ ತೀರ್ಥ ಫಲಮಂತ್ರಾಕ್ಷತೆ ಪ್ರಸಾದವನ್ನು ಸ್ವೀಕರಿಸಿ ಶ್ರೀ ಶ್ರೀನಿವಾಸ ದೇವರ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.
Veekay News > Districts > Bengaluru Urban > ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ
ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ
ವೀ ಕೇ ನ್ಯೂಸ್29/04/2026
posted on





















