Live Stream

[ytplayer id=’22727′]

| Latest Version 8.0.1 |

Local News

ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರ ಬೃಹತ್ ಪ್ರತಿಭಟನೆ

ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರ ಬೃಹತ್ ಪ್ರತಿಭಟನೆ

*ಜುಲೈ 7ರಂದು ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ, ಬೃಹತ್ ಪ್ರತಿಭಟನೆ*ಬೆಂಗಳೂರು:ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂಧಿಸದೆ ಇರುವುದರಿಂದ *ದಿನಾಂಕ : 07-07-2025 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ* ಇದರ ಕುರಿತು *ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು* ಮಾಧ್ಯಮಗಳಿಗೆ ಮಾಹಿತಿ ನೀಡಿದರು.

*ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು* ಮಾತನಾಡಿ 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಿ

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಲು ಮನವಿ.

ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.

ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸಬೇಕು.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಬೃಹತ್ ಪ್ರತಿಭಟನೆಯನ್ನು ಜುಲೈ 7ರಂದು ಸ್ವಾತಂತ್ರ್ಯ ಉದ್ಯಾನವನ(ಫೀಡಂ ಪಾರ್ಕ್)ನಲ್ಲಿ ರಾಜ್ಯದ 10ಮಹಾನಗರ ಪಾಲಿಕೆ ಸಾವಿರಾರು ಅಧಿಕಾರಿ, ನೌಕರರು ಭಾಗವಹಿಸಲಿದ್ದಾರೆ.

ಗೌರವಾಧ್ಯಕ್ಷರಾದ ಎಸ್.ಹೆಚ್.ಗುರುಮೂರ್ತಿ, ರಾಜ್ಯ ಉಪಾಧ್ಯಕ್ಷರುಗಳಾದ ಜಿ.ವೆಂಕಟ್ ರಾಮ್, ವೇಣುಗೋಪಾಲ್ ಬಿ.ಎನ್. ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಸಿ.ಬಸವರಾಜಯ್ಯ, ಖಜಾಂಚಿ ರುದ್ರೇಶ್ ಬಿ ಹಾಗೂ ರಾಜ್ಯ ಕಾರ್ಯದರ್ಶಿ ಪ್ರಹ್ಲಾದ್ ಕುಲಕರ್ಣಿ, ರಾಜ್ಯ ನಿರ್ದೇಶಕರುಗಳಾದ ಸಾಯಿಶಂಕರ್, ಜಗದೀಶ್ ಎಸ್, ಎ.ಜಿ.ಬಾಬು, ಶ್ರೀನಿವಾಸ್ ಕಟ್ಟಿ, ಬಾಬು ಪಿ, ನರಸಿಂಹ ಕೆ, ಶಾಂತಪ್ಪ ಮುಖೇಶಪ್ಪ ಪತ್ತಾರ, ರವೀಂದ್ರ ಶಿರಶ್ಯಾದ ಮತ್ತು 10ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳು , ಸದಸ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

- Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";