Live Stream

[ytplayer id=’22727′]

| Latest Version 8.0.1 |

Politics News

ಬಡ ಮಕ್ಕಳು ವಿದ್ಯಾವಂತರಾಗಿ ಉತ್ತಮ ಪ್ರಜೆಗಳಾಬೇಕು: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ಬಡ ಮಕ್ಕಳು ವಿದ್ಯಾವಂತರಾಗಿ ಉತ್ತಮ ಪ್ರಜೆಗಳಾಬೇಕು: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
ಜಯನಗರ, ಜೂ, 10; ವಿದ್ಯಾವಂತ ಸಮಾಜ ನಿರ್ಮಾಣವಾದಾಗ ದೇಶದ ಅಭಿವೃದ್ದಿ ಸಾಧ್ಯ. ವಿದ್ಯಾವಂತರಿಗೆ ಸಮಾಜದಲ್ಲಿ ಗೌರವ ಮಾನ್ಯತೆ ಇರುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಜಯನಗರದ ಭೈರಸಂದ್ರ ವಾರ್ಡ್ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 85ಕ್ಕೂ ಹೆಚ್ಚು ಅಂಕಗಳಿಸಿದ 23ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವನ್ನು ಬಾಂದವ ಸಂಸ್ಥೆ ಅಧ್ಯಕ್ಷ ಎನ್.ನಾಗರಾಜು ರವರು ನೀಡಿ ಮಾತನಾಡಿದ, ಅವರು ಬಡವರ ಮಕ್ಕಳು ವಿದ್ಯಾವಂತರಾಗಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಬೇಕು. ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಯನ್ನಾಗಿ ರೂಪಿಸಲಾಗುತ್ತಿದೆ. ಮತ್ತು ಹೈಟೆಕ್ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಶ್ರೀಮಂತರ ಮಕ್ಕಳಿಗೆ ಸಿಗುವ ಶಿಕ್ಷಣ ಸೌಲಭ್ಯಗಳು, ಸರ್ಕಾರಿ ಶಾಲೆಗಳಿಗೂ ಲಭಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಕೊಠಡಿ, ಡಿಜಿಟಲ್ ಬ್ಲಾಕ್ ಬೋರ್ಡ್, ಮಕ್ಕಳಿಗೆ ಕುಳಿತುಕೊಳ್ಳಲು ಉತ್ತಮ ಟೇಬಲ್, ಕುರ್ಚಿ ವ್ಯವಸ್ಥೆ ಹಾಗೂ ವಿಜ್ಞಾನ ಕೊಠಡಿ ಎಲ್ಲವು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸಿಗುತ್ತಿದೆ.
ಪ್ರತಿಭಾವಂತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಬೇಕಾಗುವ ಸಹಾಯ ಸಹಕಾರ ನೀಡಲಾಗುವುದು ಎಂದು ಹೇಳಿದರು.ಜಯನಗರ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಹಾಗು ಬಾಂದವ ಸಂಸ್ಥೆ ಅಧ್ಯಕ್ಷ ಎನ್.ನಾಗರಾಜು ಮಾತನಾಡಿ, ವಿದ್ಯೆ ಯಾರು ಕದಿಯಲಾಗದ ಅಮೂಲ್ಯ ಜ್ಞಾನ ಭಂಡಾರ. ಪ್ರತಿಯೊಂದು ಮಕ್ಕಳಗೆ ಶಿಕ್ಷಣ ಸಿಗಬೇಕು. ಶಿಕ್ಷಣ ವ್ಯವಸ್ಥೆಯನ್ನು ಸುಧಾರಣೆ ಮಾಡಲಾಗುತ್ತಿದ್ದು, ಉಚಿತ ನೋಟ್ ಪುಸ್ತಕ ವಿತರಣೆ, ಮಕ್ಕಳಿಗೆ ಆರೋಗ್ಯ ಸೇವೆ, ಕ್ರೀಡಾ ಚಟುವಟಿಕೆ ಹಾಗೂ ಪರಿಸರ ಜಾಗೃತಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಪಠ್ಯೇತರ ಚಟುವಟಿಕೆಗಳಿಗೂ ಆದ್ಯೆತೆ ನೀಡಲಾಗುತ್ತಿದೆ ಎಂದು ಹೇಳಿದರು.ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ, ಸಸಿಗಳನ್ನು ವಿತರಿಸಲಾಯಿತು.

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";