ಬೆಂಗಳೂರು, ಆಗಸ್ಟ್ 18 (ಕರ್ನಾಟಕ ವಾರ್ತೆ): ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಜ್ಞಾನ ದಾಸೋಹಿ ಡಾ:ಶರಣಬಸವಪ್ಪ ಅಪ್ಪ ಹಾಗೂ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳು ನಿಧನ ಹೊಂದಿರುವುದನ್ನು ತಿಳಿಸಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ವಿಧಾನ ಸಭೆಯಲ್ಲಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ನಲ್ಲಿ ಸಂತಾಪ ನಿರ್ಣಯವನ್ನು ಮಂಡಿಸಿ ಸಂತಾಪ ವ್ಯಕ್ತಪಡಿಸಿದರು.
ವಿಧಾನಸಭೆಯ ಸಚಿವರಾದ ಶಿವಾನಂದ ಪಾಟೀಲ್ ರವರು ಡಾ:ಶರಣಬಸವಪ್ಪ ಅಪ್ಪ ಹಾಗೂ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳು ಸಂತಾಪ ಸೂಚನೆಗೆ ಬೆಂಬಲ ವ್ಯಕ್ತಪಡಿಸಿ ಡಾ:ಶರಣಬಸವಪ್ಪ ಅಪ್ಪ ಅವರು 14-11-1935ರಂದು ಜನಿಸಿದ್ದು, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು, ನಂತರ ಅದೇ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ ಪ್ರತಿಷ್ಠಿತ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು, ಶರಣಬಸವೇಶ್ವರ ದೇವಸ್ಥಾನದ ದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದ ಶ್ರೀಯುತರು ಆಧ್ಯಾತ್ಮ ವಿಷಯ ಸೇರಿದಂತೆ ಹಲವು ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ಶ್ರೀಯುತರು ಶರಣಬಸವೇಶ್ವರ ವಿಶ್ವವಿದ್ಯಾಲಯ, ಶರಣಬಸವೇಶ್ವರ ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲ್, ಅಪ್ಪ ಪಬ್ಲಿಕ್ ಸ್ಕೂಲ್, ಗೋದುತಾಯಿ ಮಹಿಳಾ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಸೇರಿದಂತೆ 60 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಸುವ ಮೂಲಕ ಕಲಬುರಗಿಯಲ್ಲಿ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದರು. 1963 ರಲ್ಲಿ ಅಖಿಲ ಭಾರತ ಶಿವಾನುಭವ ಮಂಟಪ ಸ್ಥಾಪನೆ, ದಾಸೋಹ ಜ್ಞಾನರತ್ನ ಸಾಹಿತಿಕ ಪಾಕ್ಷಿಕ ಪತ್ರಿಕೆಗಳನ್ನು ಪ್ರಾರಂಭಿಸಿದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಡ್ ಪ್ರಶಸ್ತಿಗಳಲ್ಲದೇ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಶ್ರೀ ಚಂದ್ರಶೇಖರನಾಥ ಸ್ವಾಮೀಜು ಅವರು ದಿ: 10-02-1945ರಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಹಳ್ಳಿಯೊಂದರಲ್ಲಿ ಜನಿಸಿದ್ದರು. ಬಿ.ಕಾಂ ಪದವೀಧರರಾಗಿದದ ಶ್ರೀಯುತರು ಬೆಂಗಳೂರಿನ ತಿರುಚ್ಚಿ ಕೈಲಾಸಾಶ್ರಮದಲ್ಲಿ ಸಂಸ್ಕೃತ ವೇದ ಅಧ್ಯಯನ ಮಾಡಿದ್ದರು. 1968ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದ ಅವರು 1983ರಲ್ಲಿ ಕೆಂಗೇರಿ ಬಳಿ 10 ಎಕರೆ ಜಮೀನಿನಲ್ಲಿ ಶ್ರೀ ಗುರು ಜ್ಞಾನ ಕೇಂದ್ರ ಟ್ರಸ್ಟ್ ಹೆಸರಿನಲ್ಲಿ ಪತ್ಯೇಕವಾಗಿ ಶಾಲೆ ಕಾಲೇಜು ಪ್ರಾರಂಭಿಸಿದ್ದರು. ಶ್ರೀಯುತರು ಕಲ್ಯಾಣ ಕರ್ನಾಟಕದ ಬೆಳಕು ಡಾ: ಶರಣಬಸವಪ್ಪ ಅಪ್ಪ ಅವರು ದಿ: 14-08-2025ರಂದು ನಿಧನ ಹೊಂದಿರುತ್ತಾರೆ. ಇವರ ನಿಧನವು ಇಡೀ ರಾಜ್ಯವು ಕಂಬನಿ ಮಿಡಿದಿದೆ. ಆಧ್ಯಾತ್ಮಿಕ ಗುರುಗಳಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ದಿ: 16-08-2025ರಂದು ನಿಧನ ಹೊಂದಿರುತ್ತಾರೆ. ಇಬ್ಬರು ಪರಮಪೂಜ್ಯರನ್ನು ಕಳೆದುಕೊಂಡ ಕರ್ನಾಟಕ ಬಡವಾಗಿದೆ ಎಂದು ತಿಳಿಸಿ ಈರ್ವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ತಿಳಿಸಿ ಸಂತಾಪಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.
ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಇಬ್ಬರು ಶರಣರು ವಿದ್ಯಾ ಹಾಗೂ ಅನ್ನ ದಾಸೋಹಕ್ಕೆ ಹಾಗೂ ಜನತೆಯ ದು:ಖ ದುಮ್ಮಾನಗಳಿಗೆ ಸದಾ ಸ್ಪಂದಿಸುತ್ತಿದ್ದರು. ತಮ್ಮ ಬೋಧನೆಗಳ ಮೂಲಕ ಜನರ ಸಮಸ್ಯೆಗಳಿಗೆ ತಮ್ಮ ಬೋಧನೆಗಳ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದರು. ಶರಣಬಸವಪ್ಪ ಅಪ್ಪ ಅವರು ಶರಣಬಸವೇಶ್ವರ ದೇವಸ್ಥಾನದ ದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದರು. 60ಕ್ಕೂ ಹೆಚ್ಚು ಶಾಖೆಗಳನ್ನು ತೆರೆಯುವುದರ ಮೂಲಕ ಅಭೂತ ಸಾಧನೆ ಮಾಡಿದ್ದರು. 26 ಎಕರೆ ವಿಸ್ತೀರ್ಣದಲ್ಲಿ ಗೋಶಾಲೆ ನಿರ್ಮಾಣ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದ್ದಾರೆ.
ಚಂದ್ರಶೇಖರ ಸ್ವಾಮೀಜಿ ಅವರು 1968ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದ ಅವರು 1983ರಲ್ಲಿ ಕೆಂಗೇರಿ ಬಳಿ 10 ಎಕೆರೆ ಜಮೀನಿನಲ್ಲಿ ಶ್ರೀ ಗುರು ಜ್ಞಾನಕೇಂದರ ಟ್ರಸ್ಟ್ ಹೆಸರಿನಲ್ಲಿ ಪ್ರತ್ಯೇಕವಾಗಿ ಶಾಲೆ, ಕಾಲೇಜು ಪ್ರಾರಂಭಿಸಿದ್ದರು. 2002ರಲ್ಲಿ ಅದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠ ಎಂದು ಪ್ರಚಾರಪಡೆಯಿತು. ಸನಾತನ ಸಂಸ್ಕೃತಿ ಹಾಗೂ ಪರಂಪರೆಗಳ ರಕ್ಷಕರಾಗಿದ್ದ ಶ್ರೀಯುತರು ಹಲವು ಸಾಮಾಜಿಕ ಚಳುವಳಿಗಳ ನೇತೃತ್ವ ವಹಿಸಿದ್ದರು. ಇಬ್ಬರೂ ಕೂಡ ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ತಿಳಿಸಿ ಸಂತಾಪಕ್ಕೆ ಬೆಂಬಲ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರುಗಳಾದ ಅರವಿಂದ ಬೆಲ್ಲದ್, ಶರಣ್ ಕುಮಾರ್ ಕುಂದಾಪುರ, ಅರಗ ಜ್ಞಾನೇಂದ್ರ, ಅಲ್ಲಮಪ್ರಭು ಪಾಟೀಲ್, ಶರತ್ ಬಚ್ಚೇಗೌಡ, ಜಿ.ಟಿ ದೇವೇಗೌಡ, ಡಾ ಉಮೇಶ್ ಜಿ. ಜಾಧವ್, ಹಾಗೂ ಇನ್ನಿತರ ಶಾಸಕರು ಡಾ:ಶರಣಬಸಪ್ಪ ಅಪ್ಪ ಹಾಗೂ ಚಂದ್ರಶೇಖರ ಸ್ವಾಮೀಜಿ ಇವರುಗಳು ಸಂತಾಪ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ತಮ್ಮ ಸಂತಾಪ ವ್ಯಕ್ತಪಡಿಸಿದರು.
ವಿಧಾನಪರಿಷತ್ ನಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿರಾದ ಡಾ: ಶರಣ್ ಪ್ರಕಾಶ್ ರುದ್ರಪ್ಪ ಪಾಟೀಲ್, ಅರಣ್ಯ ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಪರಿಷತ್ ಸದಸ್ಯರಾದ ತಳವಾರ ಸಾಬಣ್ಣ, ದಿನೇಶ್ ಗೂಳೀಗೌಡ, ಶಶಿಲ್ ನಮೋಶಿ ಅವರು ಬೆಂಬಲ ವ್ಯಕ್ತಪಡಿಸಿ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು.
ನಂತರ ಉಭಯ ಸದನಗಳಲ್ಲಿ ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ಮಾಡಿ, ನಂತರ ಸದನಲ್ಲಿ ಪ್ರಸ್ತಾಪಿತ ಸಂತಾಪ ಸೂಚನೆಯ್ನು ಮೃತಗಣ್ಯರ ಕುಟುಂಬಕ್ಕೆ ಕಳುಹಿಸಲಾಯಿತು.