*ಸುಪ್ರೀಂ ಕೋರ್ಟ್ ಆದೇಶದಂತೆ ಮೀಸಲಾತಿ ಪ್ರಮಾಣ ಶೇ 56 ರಿಂದ ಶೇ 50ಕ್ಕೆ ಇಳಿಸಿ ಆದೇಶ ಜಾರಿ ಅಪ್ರಸ್ತುತವಾಗಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆ ಕುರಿತ ವರದಿ ಕೈಬಿಡುವಂತೆ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹ*
ಬೆಂಗಳೂರು, ಜೂ, 10; ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಮೀಸಲಾತಿಯನ್ನು ಶೇಕಡ 50ಕ್ಕೆ ಮಿತಿಗೊಳಿಸಿ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂತರಾಜು, ಜಯಪ್ರಕಾಶ್ ಹೆಗಡೆ ನೇತೃತ್ವದ ಸಾಮಾಜಿಕ, ಆರ್ಥಿಕ ಸಮೀಕ್ಷೆ ಕುರಿತ ವರದಿ ಅಪ್ರಸ್ತುವಾಗಿದೆ. ಹೀಗಾಗಿ ಈ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಡಿಟರ್ ನಾಗರಾಜ್ ಯಲಚವಾಡಿ ಮಾತನಾಡಿ, ಸವೀಕ್ಷೆಯಲ್ಲಿ ರಾಜ್ಯದ ಎಲ್ಲಾ ನಾಗರೀಕರ ಮಾಹಿತಿಯನ್ನು ಸಂಗ್ರಹಿಸಿಲ್ಲ. ಒಟ್ಟು ಜನಸಂಖ್ಯೆಯ ಶೇಕಡಾ 90 ರಷ್ಟು ಜನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ನಡೆದಿಲ್ಲ ಎಂದು ಸರ್ಕಾರವೇ ಒಪ್ಪಿಕೊಂಡಿದೆ. 10 ವರ್ಷಗಳಲ್ಲಿ ಜನಸಂಖ್ಯೆ ಏರಿಕೆಯಾಗಿದ್ದು, ಇತರೆ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯಲ್ಲಿ ಬಹಳಷ್ಟು ಬದಲಾವಣೆಯಾಗಿದೆ. 10 ವರ್ಷಗಳ ಹಿಂದಿನ ವರದಿ ಸ್ವೀಕರಿಸಿ ಮಾಡುವ ತೀರ್ಮಾನಗಳು ವಾಸ್ತವತೆಗಿಂತ ದೂರ ಇರಲಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಕಾರ್ಯದರ್ಶಿ ಎಂ.ಎ.ಆನಂದ್, ಸಂಘದ ಪ್ರಧಾನ ಕಾರ್ಯದರ್ಶಿ ಅಡಿಟರ್ ನಗರಾಜ್ ಯಲಚವಾಡಿ, ಕಡಬಗೆರೆ ಒಕ್ಕಲಿಗರ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಸಿ.ಶಿವರಾಮು, ಒಕ್ಕಲಿಗ ಸಮಾಜದ ಮುಖಂಡರಾದ ರಂಗನರಸಿಂಹಯ್ಯ, ಮೇಲುಕೋಟೆ ಶಿವರಾಜು ಮತ್ತಿತರರು ಉಪಸ್ಥಿತರಿದ್ದರು.