ಸಾರ್ವಜನಿಕ ವಲಯ ಉದ್ಯಮಗಳನ್ನು(PSUs) ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸುವ ಕೇಂದ್ರದ ಕ್ರಮವನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ಹೊರವಲಯ ಡಾಬಸ್ ಪೇಟೆಯಲ್ಲಿಂದು ಕಾಸಿಯಾ ಶ್ರೇಷ್ಠತೆ ಮತ್ತು ನಾವೀನ್ಯತೆ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಡಿ ಕೆ ಶಿವಕುಮಾರ್, ಕರ್ನಾಟಕದಿಂದ ಕೈಗಾರಿಕೆಗಳನ್ನು ಇತರ ರಾಜ್ಯಗಳಿಗೆ, ವಿಶೇಷವಾಗಿ ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸುವ ಯಾವುದೇ ಕ್ರಮವನ್ನು ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜ್ಯ ಸರ್ಕಾರದ ಒಪ್ಪಿಗೆಯಿಲ್ಲದೆ, ಕೇಂದ್ರವು ಅನೇಕ ಜನರ ಜೀವನದ ಮೇಲೆ ಪರಿಣಾಮ ಬೀರುವ ಯಾವುದೇ ಕ್ರಮವನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರದೊಂದಿಗೆ ಚರ್ಚಿಸಲು ಕೇಳಿಕೊಳ್ಳುವುದಾಗಿ ಹೇಳಿದ ಉಪ ಮುಖ್ಯಮಂತ್ರಿಗಳು, ಈ ಬಗ್ಗೆ ಮೂಲಭೂತ ವಾಸ್ತವಗಳ ಬಗ್ಗೆ ತಿಳಿದುಕೊಳ್ಳಲು ದೆಹಲಿಯಲ್ಲಿ ಸಂಪುಟ ಮಂತ್ರಿಗಳನ್ನು ನಿಯೋಗ ಭೇಟಿ ಮಾಡಲು ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ (ಏಂSSIಂ)ವನ್ನು ಕೇಳಿಕೊಂಡರು.
“ನಮ್ಮಲ್ಲಿ ಹಲವಾರು ಕೈಗಾರಿಕೆಗಳಲ್ಲಿ ಲಕ್ಷಾಂತರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ, ಅವರು ವಲಸೆ ಹೋಗಲು ಬಯಸುವುದಿಲ್ಲ. ಅನೇಕ ಉದ್ಯೋಗಿಗಳು ಗುತ್ತಿಗೆ ಆಧಾರದ ನೌಕರರಾಗಿದ್ದಾರೆ. ಅವರೆಲ್ಲರಿಗೂ ಸರ್ಕಾರ ಉದ್ಯೋಗ ಕೊಡಲು ಸಾಧ್ಯವಿಲ್ಲ. ತಾತ್ಕಾಲಿಕ ಉದ್ಯೋಗ ಎಂದು ಅವರು ವಲಸೆ ಹೋಗಬಾರದು, ಅದನ್ನು ನಾವು ತಪ್ಪಿಸಬೇಕು ಎಂದರು.
“ನಮ್ಮಲ್ಲಿ ಹಲವಾರು ಕೈಗಾರಿಕೆಗಳಲ್ಲಿ ಲಕ್ಷಾಂತರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ, ಅವರು ವಲಸೆ ಹೋಗಲು ಬಯಸುವುದಿಲ್ಲ. ಅನೇಕ ಉದ್ಯೋಗಿಗಳು ಗುತ್ತಿಗೆ ಆಧಾರದ ನೌಕರರಾಗಿದ್ದಾರೆ. ಅವರೆಲ್ಲರಿಗೂ ಸರ್ಕಾರ ಉದ್ಯೋಗ ಕೊಡಲು ಸಾಧ್ಯವಿಲ್ಲ. ತಾತ್ಕಾಲಿಕ ಉದ್ಯೋಗ ಎಂದು ಅವರು ವಲಸೆ ಹೋಗಬಾರದು, ಅದನ್ನು ನಾವು ತಪ್ಪಿಸಬೇಕು ಎಂದರು.
ಕರ್ನಾಟಕವು ಐಟಿ ವಲಯದಲ್ಲಿ ಹೂಡಿಕೆಗೆ ಮಾತ್ರವಲ್ಲದೆ ಕೈಗಾರಿಕೆಗಳಿಗೆ ಸಹ ಪ್ರಮುಖ ತಾಣವಾಗಿದೆ ಎಂದು ಬಲವಾದ ವಾದವನ್ನು ಮಂಡಿಸಿದ ಅವರು, ಕಾಂಗ್ರೆಸ್ ಸರ್ಕಾರದ ಹೂಡಿಕೆ ಸ್ನೇಹಿ ನೀತಿಗಳಿಂದಾಗಿ ಇದು ಸಾಧ್ಯವಾಗಿದೆ ಎಂದು ಹೇಳಿದರು. ಕರ್ನಾಟಕಕ್ಕೆ ಬರುವ ಕೈಗಾರಿಕೆಗಳಿಗೆ ನಾವು ಬೆಂಬಲ ನೀಡುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು. ಪ್ರಸ್ತುತ ಅಡಚಣೆಯಾಗಿರುವ ಸಂಚಾರ ದಟ್ಟಣೆಯನ್ನು ತಗ್ಗಿಸಲು ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಹಣಕಾಸು ಒದಗಿಸುತ್ತಿದೆ ಎಂದು ಅವರು ಉಲ್ಲೇಖಿಸಿದರು. ಫ್ಲೈ ಓವರ್ಗಳು, ಡಬಲ್ ಡೆಕ್ಕರ್ ಮೆಟ್ರೋ ಮತ್ತು ಸರ್ಕಾರವು ಪರಿಗಣಿಸುತ್ತಿರುವ ಇತರ ಚಲನಶೀಲ ಯೋಜನೆಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಉಲ್ಲೇಖಿಸಿದರು.
ಕರ್ನಾಟಕದಲ್ಲಿ ಅತ್ಯುತ್ತಮ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆಗಳಿವೆ. ಮಹೀಂದ್ರಾ, ಜಿಂದಾಲ್ ಮೊದಲಾದ ಖ್ಯಾತ ಉದ್ಯಮಿಗಳು ಬೆಂಗಳೂರಿನಲ್ಲಿ ಅಧ್ಯಯನ ಮಾಡಿ ದೇಶಾದ್ಯಂತ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ ಎಂದು ಅವರು ಉಲ್ಲೇಖಿಸಿದರು. ಕರ್ನಾಟಕದಲ್ಲಿ ಪ್ರತಿಭಾನ್ವಿತರ ಗುಂಪು ಈ ರಾಜ್ಯಕ್ಕೆ ಮತ್ತು ದೇಶಕ್ಕೆ ಆಸ್ತಿಯಾಗಿದ್ದು, ಅಂಥವರಿಗೆ ರಾಜ್ಯ ಸರ್ಕಾರ ಬೆಂಬಲ ನೀಡುವುದನ್ನು ಮುಂದುವರಿಸುತ್ತದೆಕಾಸಿಯಾ ಶ್ರೇಷ್ಠತೆ ಮತ್ತು ನಾವೀನ್ಯತೆ ಕೇಂದ್ರದ ಸ್ಥಾಪನೆಯು ಕೈಗಾರಿಕೋದ್ಯಮದ ಶ್ಲಾಘನೀಯ ಉಪಕ್ರಮವಾಗಿದೆ. ರಾಜ್ಯ ಸರ್ಕಾರವು, ಕಾಸಿಯಾ ಕೇಂದ್ರಕ್ಕೆ ಬೆಂಬಲ ಒದಗಿಸುವುದು ಮಾತ್ರವಲ್ಲದೆ ಸಚಿವಾಲಯ ಸ್ಥಾಪಿಸಬೇಕೆಂಬ ಅದರ ಬೇಡಿಕೆಗೆ ಸಹ ಉತ್ತೇಜನ ನೀಡುತ್ತದೆ ಎಂದರು.
ಬ್ಯಾಂಕ್ಗಳು ಹೊಸಬರಿಗೆ ಮನ್ನಣೆ ಕೊಡಬೇಕು
ಬ್ಯಾಂಕಿಂಗ್ ವಲಯ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಹೊಸ ಉದ್ಯಮಿಗಳಿಗೆ ಬ್ಯಾಂಕುಗಳಿಂದ ಅಗತ್ಯವಾದ ಬೆಂಬಲ ಸಿಗುತ್ತಿಲ್ಲ, ಈಗ ಇರುವ ಉದ್ಯಮಿಗಳು ಅವರ ಕಾರ್ಯಕ್ಷಮತೆಯ ಆಧಾರದ ಮೇಲೆ ಸಾಲಗಳನ್ನು ಪಡೆಯುತ್ತಿದ್ದಾರೆ ಎಂದು ಹೇಳಿದರು. ಹೊಸ ಉದ್ಯಮಿಗಳಿಗೆ ಸಹಾಯ ಮಾಡುವಂತೆ ಮತ್ತು ಸಾಲ ತೆಗೆದುಕೊಳ್ಳುವವರಿಗೆ ಮೇಲಾಧಾರ ನೀಡುವವರಿಗೆ ತೊಂದರೆ ನೀಡದಂತೆ ಅವರು ಬ್ಯಾಂಕುಗಳಿಗೆ ಕರೆ ನೀಡಿದರು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು(ಒSಒಇ) ವಲಯವು ಸ್ಥಳೀಯ ಉದ್ಯೋಗಕ್ಕೆ ಅವಕಾಶಗಳನ್ನು ಸೃಷ್ಟಿಸುವಂತೆ ಒತ್ತಾಯಿಸಿದರು. ತರಬೇತಿ ಕೇಂದ್ರವು ಶೇಕಡಾ 100 ರಷ್ಟು ಉದ್ಯೋಗಾವಕಾಶವನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಉತ್ಪನ್ನಗಳ ರಫ್ತಿಗೆ ಸಹಾಯ ಮಾಡಬೇಕು ಎಂದು ಹೇಳಿದರು.
ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ಒತ್ತಿ ಹೇಳಿದ ಸಚಿವರು, ಭಾರತೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುವ ಎಂಎಸ್ಎಂಇ ವಲಯದಲ್ಲಿ ತಂತ್ರಜ್ಞಾನಗಳು, ತರಬೇತಿ ಇತ್ಯಾದಿಗಳನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಸರ್ಕಾರ ಬೆಂಬಲಿಸುತ್ತದೆ ಎಂದು ಭರವಸೆ ನೀಡಿದರು.
ಕೌಶಲ್ಯ ಅಭಿವೃದ್ಧಿಯ ಮಹತ್ವವನ್ನು ಒತ್ತಿ ಹೇಳಿದ ಸಚಿವರು, ಭಾರತೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುವ ಎಂಎಸ್ಎಂಇ ವಲಯದಲ್ಲಿ ತಂತ್ರಜ್ಞಾನಗಳು, ತರಬೇತಿ ಇತ್ಯಾದಿಗಳನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಸರ್ಕಾರ ಬೆಂಬಲಿಸುತ್ತದೆ ಎಂದು ಭರವಸೆ ನೀಡಿದರು.
ಕೆಎಎಸ್ಐಎ, ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್ ಅತಿಥಿಗಳನ್ನು ಸ್ವಾಗತಿಸಿದರು.