ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ಇವತ್ತು ನಡೆಯಲಿದ್ದು, ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಧಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಸುತ್ತಮುತ್ತಲಿನ ಗ್ರಾಮಸ್ಧರು ವಿರೋಧದ ನಡುವೆಯೂ ಪರಮಾಣು ವಿದ್ಯುತ್ ಸ್ಧಾವರಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ,
ದೇಶದ ದೀರ್ಘಕಾಲೀನ ಇಂಧನ ಪರಿವರ್ತನಾ ಕಾರ್ಯತಂತ್ರದ ಭಾಗವಾಗಿ ಪರಮಾಣು ಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಕೇಂದ್ರ ಸರ್ಕಾರವು 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮಥ್ರ್ಯದ ಗುರಿಯನ್ನು ಹೊಂದಿದೆ, ಈ ಹಿನ್ನೆಲೆ ರಾಜ್ಯ ಸರ್ಕಾರ ಅನುಮತಿ ನೀಡೋಕೆ ಸರ್ಕಾರ ಮುಂದಾಗಿದೆ,
ಮತ್ತೊಂದೆಡೆ ಸುರ್ಜೆವಾಲಾ ಈಗಾಗಲೆ ಸಚಿವರ ಜತೆ ಒನ್ ಟು ಒನ್ ಚರ್ಚೆ ನಡೆಸಿದ್ದು, ಭಿನ್ನಮತ ಶಮನಕ್ಕೆ ಸಕಲ ಸರ್ಕಸ್ ನಡೆಸಲಾಗಿದೆ, ಆಂತರಿಕ ಕಚ್ಚಾಟವನ್ನು ಕಡಿಮೆ ಮಾಡಿ ಸುಭದ್ರ ಆಡಳಿತ ನೀಡುವ ಸಂಬಂದವೂ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ,
VK NEWS DIGITAL