Live Stream

[ytplayer id=’22727′]

| Latest Version 8.0.1 |

State News

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ವೀ ಕೇ ನ್ಯೂಸ್
";